8:05 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ

27/03/2024, 16:13

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು.
ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ನಗರದ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಿದರು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಿದರು. ಸುಮಾರು 7 ಸಾವಿರ ಜನರು ಭಾಗವಹಿಸಿದ್ದರು.

ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು