8:25 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ

27/03/2024, 16:13

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು.
ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ನಗರದ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಿದರು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಿದರು. ಸುಮಾರು 7 ಸಾವಿರ ಜನರು ಭಾಗವಹಿಸಿದ್ದರು.

ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು