2:51 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಕುಮಾರಸ್ವಾಮಿ ಮನ ಪರಿವರ್ತನೆಯಾಗಿದೆ, ಜೆಡಿಎಸ್ ಶೀಘ್ರದಲ್ಲೇ ಬಿಜೆಪಿ ಜತೆ ವಿಲೀನವಾಗಲಿದೆ: ಮಾಜಿ ಸಿಎಂ ಶೆಟ್ಟರ್ ಭವಿಷ್ಯ

13/12/2023, 11:20

ಹುಬ್ಬಳ್ಳಿ (reporterkarnataka.com):ಮಾಜಿ ಮುಖ್ಯಮಂತ್ರಿ, ಜಾತ್ಯತೀತ ಜನತಾ ದಳದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಮನ ಪರಿವರ್ತನೆಯಾಗಿದೆ. ಜೆಡಿಎಸ್ ಶೀಘ್ರದಲ್ಲೇ ಬಿಜೆಪಿ ಜತೆ ವಿಲೀನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಆರೆಸ್ಸೆಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಶಾಲೆಯ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ಕುಮಾರಸ್ವಾಮಿ ಅವರು ನನ್ನ ಮನ ಪರಿವರ್ತನೆಯಾಗಿದೆ ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನಕ್ಕೆ ಇದು ಪುಷ್ಠಿ ನೀಡುತ್ತದೆ. ಜೆಡಿಎಸ್ ಮತ್ತು ಬಿಜೆಪಿ ವಿಲೀನವಾಗುವ ಪ್ರಾಥಮಿಕ ಹಂತದ ಮುನ್ಸೂಚನೆ ಇದಾಗಿದೆ. ಸಿ.ಎಂ. ಇಬ್ರಾಹಿಂ ಅವರು ಈಗಾಗಲೇ ಮತ್ತೊಂದು ಜೆಡಿಎಸ್ ಕಟ್ಟಿದ್ದಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಇರುವ ಜೆಡಿಎಸ್ ಬಿಜೆಪಿ ಜತೆ ಶೀಘ್ರ ವಿಲೀನವಾಗಲಿದೆ ಎಂದು ಭವಿಷ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು