10:27 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕುಮಾರಸ್ವಾಮಿ ಮನ ಪರಿವರ್ತನೆಯಾಗಿದೆ, ಜೆಡಿಎಸ್ ಶೀಘ್ರದಲ್ಲೇ ಬಿಜೆಪಿ ಜತೆ ವಿಲೀನವಾಗಲಿದೆ: ಮಾಜಿ ಸಿಎಂ ಶೆಟ್ಟರ್ ಭವಿಷ್ಯ

13/12/2023, 11:20

ಹುಬ್ಬಳ್ಳಿ (reporterkarnataka.com):ಮಾಜಿ ಮುಖ್ಯಮಂತ್ರಿ, ಜಾತ್ಯತೀತ ಜನತಾ ದಳದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಮನ ಪರಿವರ್ತನೆಯಾಗಿದೆ. ಜೆಡಿಎಸ್ ಶೀಘ್ರದಲ್ಲೇ ಬಿಜೆಪಿ ಜತೆ ವಿಲೀನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಆರೆಸ್ಸೆಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಶಾಲೆಯ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ಕುಮಾರಸ್ವಾಮಿ ಅವರು ನನ್ನ ಮನ ಪರಿವರ್ತನೆಯಾಗಿದೆ ಎಂದು ಹೇಳಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನಕ್ಕೆ ಇದು ಪುಷ್ಠಿ ನೀಡುತ್ತದೆ. ಜೆಡಿಎಸ್ ಮತ್ತು ಬಿಜೆಪಿ ವಿಲೀನವಾಗುವ ಪ್ರಾಥಮಿಕ ಹಂತದ ಮುನ್ಸೂಚನೆ ಇದಾಗಿದೆ. ಸಿ.ಎಂ. ಇಬ್ರಾಹಿಂ ಅವರು ಈಗಾಗಲೇ ಮತ್ತೊಂದು ಜೆಡಿಎಸ್ ಕಟ್ಟಿದ್ದಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಇರುವ ಜೆಡಿಎಸ್ ಬಿಜೆಪಿ ಜತೆ ಶೀಘ್ರ ವಿಲೀನವಾಗಲಿದೆ ಎಂದು ಭವಿಷ್ಯ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು