8:26 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕುಂಭಮೇಳ: ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರ

25/12/2024, 19:14

ಬೆಂಗಳೂರು(reporterkarnataka.com): ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು