9:16 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಕುಂಭಮೇಳ: ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರ

25/12/2024, 19:14

ಬೆಂಗಳೂರು(reporterkarnataka.com): ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು