4:03 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕುಂಭಮೇಳ: ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

29/01/2025, 19:48

ಮೈಸೂರು(reporterkarnataka.com): ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.
*ಸಮಸ್ಯೆ ಇದ್ದರೆ ನಮ್ಮ ಕಚೇರಿ ಸಂಪರ್ಕಿಸಿ:*
ಕುಂಭಮೇಳದಲ್ಲಿ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ಪಾಲ್ಗೊಂಡಿದ್ದು, ಯಾರಿಗೆ ಆದರೂ ಸಮಸ್ಯೆ ಆಗಿದ್ದರೆ ದೆಹಲಿಯಲ್ಲಿರುವ ನನ್ನ ಸಚಿವಾಲಯವನ್ನು ಸಂಪರ್ಕಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.
ಯಾರಿಗೆ ಸಮಸ್ಯೆ ಆಗಿದ್ದರೂ ನನ್ನ ಸಂಪರ್ಕ ಮಾಡಲು ಹೇಳಿದ್ದೇನೆ. ಮಾಧ್ಯಮದ ಮೂಲಕ ಮತ್ತೆ ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳಿಗೂ ಕೂಡ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು