6:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕುಂಭಮೇಳ: ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿಗಳು ಸೂಚಿಸಿದ್ದಾರೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ

29/01/2025, 19:48

ಮೈಸೂರು(reporterkarnataka.com): ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.
*ಸಮಸ್ಯೆ ಇದ್ದರೆ ನಮ್ಮ ಕಚೇರಿ ಸಂಪರ್ಕಿಸಿ:*
ಕುಂಭಮೇಳದಲ್ಲಿ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ಪಾಲ್ಗೊಂಡಿದ್ದು, ಯಾರಿಗೆ ಆದರೂ ಸಮಸ್ಯೆ ಆಗಿದ್ದರೆ ದೆಹಲಿಯಲ್ಲಿರುವ ನನ್ನ ಸಚಿವಾಲಯವನ್ನು ಸಂಪರ್ಕಿಸಿ ಎಂದು ಸಚಿವರು ಮನವಿ ಮಾಡಿದ್ದಾರೆ.
ಯಾರಿಗೆ ಸಮಸ್ಯೆ ಆಗಿದ್ದರೂ ನನ್ನ ಸಂಪರ್ಕ ಮಾಡಲು ಹೇಳಿದ್ದೇನೆ. ಮಾಧ್ಯಮದ ಮೂಲಕ ಮತ್ತೆ ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳಿಗೂ ಕೂಡ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು