4:21 PM Thursday24 - April 2025
ಬ್ರೇಕಿಂಗ್ ನ್ಯೂಸ್
Chamarajanagara | ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಿ: ಗೃಹ… ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ… ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178… Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;…

ಇತ್ತೀಚಿನ ಸುದ್ದಿ

ಕುಮ್ಡೇಲು: ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೊರ‍್ದಬ್ಬು ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಧಾರ್ಮಿಕ ಸಭೆ

24/04/2025, 12:29

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಹಿಂದೂ ಸಮಾಜ ಸಂಘಟಿತವಾಗದೇ ಇದ್ದರೆ ಕಾಶ್ಮೀಯದಂತಹ ದಾಳಿಗಳು ನಮ್ಮ ಊರಿನಲ್ಲೂ ನಡೆಯುವ ಅಪಾಯವಿದ್ದು, ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನದ ಮೂಲಕ ಸಮಾಜ ಒಗ್ಗಟ್ಟಾಗಬೇಕಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಕುಮ್ಡೇಲು ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೊರ‍್ದಬ್ಬು ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಹಾಗೂ ೭೫ನೇ ವರ್ಷದ ನೇಮದ ಸುಧರ್ಮ ಸಭೆಯಲ್ಲಿ ಮಾತನಾಡಿದರು. ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಉಮೇಶ್ ಸಾಲ್ಯಾನ್ ಬೆಂಜನಪದವು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಭರತ್ ಕುಮ್ಡೇಲು ಅವರ ನೇತೃತ್ವದಲ್ಲಿ ಹೊರ ತಂದ ಭಕ್ತಿಗೀತೆಯನ್ನು ಬಿಡುಗಡೆಗೊಳಸಲಾಯಿತು. ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಯಾದವರಿಗೆ ಮೌನ ಪ್ರಾರ್ಥನೆಯ ಗೌರವ ಸಲ್ಲಿಸಲಾಯಿತು.
ವೇದಿಕೆಯಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಬಾರ್ಕೂರು ಶ್ರೀ ಕಚ್ಚೂರ ಮಾಲ್ದಿದೇವಿ ದೇವಸ್ಥಾನದ ಅಧ್ಯಕ್ಷ ಶಿವಪ್ಪ ನಂತೂರು, ನೈಜೀರಿಯಾದ ಉದ್ಯಮಿ ಅಜಿತ್ ಚೌಟ ದೇವಸ್ಯ, ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು, ಬಂಟ್ವಾಳ ವಿಹಿಂಪ ಅಧ್ಯಕ್ಷ ಪ್ರಸಾದ್‌ಕುಮಾರ್ ರೈ, ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿವಾಕರ ಪಂಬದಬೆಟ್ಟು, ದೈವ ನರ್ತಕ ನೋಣಯ್ಯ ನಲಿಕೆ ಕೆಂಜಿಲ, ಉದ್ಯಮಿ ಧನರಾಜ್ ಶೆಟ್ಟಿ ತೇವು, ಕ್ಷೇತ್ರದ ಆಡಳಿತ ಮೊಕ್ತೇಸರ ಭಾಸ್ಕರ ಚೌಟ ಕುಮ್ಡೇಲು, ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ, ಗುರಿಕಾರ ವೆಂಕಪ್ಪ ಕುಮ್ಡೇಲು ಉಪಸ್ಥಿತರಿದ್ದರು.
ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಉಮೇಶ್ ಶೆಟ್ಟಿ ಬರ್ಕೆ ಸ್ವಾಗತಿಸಿದರು. ವೇದಿಕೆ ಸಮಿತಿ ಸದಸ್ಯ ಶರಣ್ ಭಂಡಾರಿ ವಂದಿಸಿದರು.ಯಕ್ಷ ಸಂಘಟಕ ಜನಾರ್ದನ ಅಮ್ಮುಂಜೆ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು