3:02 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕುಂಕುಮ- ಬಳೆ ನಮ್ಮ ಸಂಸ್ಕೃತಿಯ ಪ್ರತೀಕ, ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ

19/02/2022, 20:27

ಬೆಂಗಳೂರು(reporterkarnataka.com): ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಳೆ, ಬಿಂದಿ, ಸಿಂಧೂರ, ಕುಂಕುಮಗಳು ಅಲಂಕಾರಿಕ ವಸ್ತುಗಳು, ಅವುಗಳಿಗೆ ನಿರ್ಬಂಧ ಹಾಕಲು ಸಾಧ್ಯವಿಲ್ಲ. ಹಿಜಾಬ್ ಧಾರ್ಮಿಕ ಗುರುತನ್ನು ಸಂಕೇತಿಸುವ ಬಟ್ಟೆ ಹಿಜಾಬ್‍ಗೆ ಪ್ರತಿಯಾಗಿ ಬಳೆ, ಸಿಂಧೂರ, ಕುಂಕುಮವನ್ನು ಹೋಲಿಸುವುದು ಬೇಡ. ಅದನ್ನು ಧರಿಸಿ ಬಂದವರನ್ನು ತಡೆದರೆ ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಹೇಳಿದರು.

ಹಿಜಾಬ್ ಧರ್ಮವನ್ನು ಸೂಚಿಸಿದರೆ ಬಳೆ, ಕುಂಕುಮ, ಬಿಂದಿ, ಸಿಂಧೂರ ಅಲಂಕಾರವನ್ನು ಸೂಚಿಸುತ್ತದೆ. ಅಲಂಕಾರಿಕ ವಸ್ತುಗಳನ್ನು ಧರಿಸಿಕೊಂಡು ಬನ್ನಿ ಎಂದು ನಾವು ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿಲ್ಲ. ಸ್ವ ಇಚ್ಛೆಯಿಂದ ಹಾಕಿಕೊಂಡು ಬರುತ್ತಾರೆ ಎಂದು ಅವರು ಸ್ಪಷ್ಟನೆ ನೀಡಿದರು.

ನಿನ್ನೆ ವಿಜಯಪುರದ ಇಂಡಿ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ತಿಲಕ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕರು ಪ್ರವೇಶ ನಿರಾಕರಿಸಿದ್ದು ಭಾರೀ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಈ ಆದೇಶ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು