4:00 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕುಮಟಾದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

30/12/2021, 18:55

ಕುಮಟಾದಲ್ಲಿ(reporterkarnataka.com):

ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ   ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಕೀರ್ತಿ ಕುಟುಂಬದ ವಿವಾಹ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ಯುವಕನ ಮದುವೆಯು ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಇಂದು ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹಬ್ಬಳ್ಳಿಯಿಂದ ನೇರವಾಗಿ ಕುಮಟಾಕ್ಕೆ ಆಗಮಿಸಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನವ ವಧು- ವರರನ್ನು ಆಶೀರ್ವದಿಸಿದರು.

ಕೋಟದವರಾದ ಸಚಿವರು ಈ ಸಂದರ್ಭದಲ್ಲಿ ಮಾತನಾಡಿ, ಈ ಕೇರಿಯನ್ನು ನಾನು ಹತ್ತಿರದಿಂದ ಕಂಡಿದ್ದೇನೆ, ಅವರೆಲ್ಲರ ಆತ್ಮೀಯತೆಯನ್ನು ಗಳಿಸಿದ್ದೇನೆ. ನನ್ನೂರ ಭಾಗದಲ್ಲಿ ಇರುವಂತಹ ಏಕೈಕ ಕೊರಗರ ಕೇರಿ ಇದಾಗಿದೆ. ಈ ಮುಗ್ಧ ಜನರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ ಎಂದರು.
ಸಚಿವರು ಸಂತ್ರಸ್ತ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು