4:45 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಕುಂದಾಪುರ | ಅಸೋಡು ವಾರಾಹಿ ಕಾಲುವೆಗೆ ಬಿದ್ದ ಕಾಡುಕೋಣ ರಕ್ಷಣೆ

26/04/2026, 10:02

ಕುಂದಾಪುರ(reporterkarnataka.com):ಕುಂದಾಪುರ ಕಾಳಾವರ ಗ್ರಾ.ಪಂ. ವ್ಯಾಪ್ತಿಯ ಅಸೋಡು ಶ್ರೀ ಕುಮಾರ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ವಾರಾಹಿ ಕಾಲುವೆಯಲ್ಲಿ ಬಿದ್ದಿದ್ದ‌ ಭಾರೀ ಗಾತ್ರದ ಕಾಡುಕೋಣವನ್ನು ಸ್ಥಳೀಯರ ಸಹಕಾರದಿಂದ ಅರಣ್ಯ ಇಲಾಖೆ ಸಿಬಂದಿ ರಕ್ಷಿಸಿದ್ದಾರೆ.ನೀರು ಮತ್ತು ಆಹಾರ ಅರಸಿ ಸಮೀಪದ ಅರಣ್ಯ ಪ್ರದೇಶದಿಂದ ಜನವಸತಿ ಪ್ರದೇಶಕ್ಕೆ ಬಂದಿದ್ದ ಕಾಡುಕೋಣ ಶುಕ್ರವಾರ ಆಕಸ್ಮಿಕವಾಗಿ ಅಸೋಡಿನ ವಾರಾಹಿ ಕಾಲುವೆಗೆ ಬಿದ್ದಿತ್ತು. ಬರೋಬ್ಬರಿ 20 ತಾಸುಗಳ ಕಾಲ ಕಾಲುವೆಯಲ್ಲಿದ್ದ ಅದು ಕಾಲುವೆಯಿಂದ ಮೇಲಕ್ಕೆ ಬರಲು ಹರಸಾಹಸ ಮಾಡಿದ್ದರೂ ಸಾಧ್ಯವಾಗಿರಲಿಲ್ಲ.
ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿ, ಸ್ಥಳೀಯರ ಸಹಕಾರದಿಂದ ಶನಿವಾರ ಬೆಳಗ್ಗೆ ರಕ್ಷಣ ಕಾರ್ಯಾಚರಣೆ ಆರಂಭಿಸಿದ್ದರು.
ಕಾಳಾವರ ಗ್ರಾ.ಪಂ. ಮಾಜಿ ಸದಸ್ಯ ಚಂದ್ರ ಪೂಜಾರಿ ಕಾಳಾವರ, ವಲಯ ಅರಣ್ಯಾಧಿಕಾರಿ ರಾಘವೇಂದ್ರ ಮಾರ್ಗದರ್ಶನದಲ್ಲಿ ಉಪ ಅರಣ್ಯಾಧಿಕಾರಿಗಳಾದ ವಿನಯ್, ಗುರು ನಾಯ್ಕ್, ಸಿಬಂದಿ ಮಾಲತಿ, ರಂಜಿತ್, ಸುನೀಲ್ ಮತ್ತು ಅಶೋಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು