3:24 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು