2:11 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು