9:57 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು