11:06 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ

21/09/2022, 21:02

ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ  ಗಣಿ ಮತ್ತು ಭೂವಿಜ್ಞಾನ ಇಲಾಖೆಯ  ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಕುಂದಾಪುರ ತಾಲೂಕು ತ್ರಾಸಿ,  ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ  ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ  ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ..

ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಮ ದೇವಸ್ಥಾನದ  ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್  ಲಾರಿಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ. ತ್ರಾಸಿ ವ್ಯಾಪ್ತಿಯ ಅನಧಿಕೃತ ಮರಳು ದಕ್ಕೆಗಳಿಗೆ ದಾಳಿಯಾಗುತ್ತಿದ್ದಂತೆ, ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ , ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲೂಕು  ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೂವಿಜ್ಞಾನಿಯವರು ತಿಳಿಸಿರುತ್ತಾರೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ  ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಸದರಿ  ಲಾರಿಗಳನ್ನು  ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು