12:15 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ

21/09/2022, 21:02

ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ  ಗಣಿ ಮತ್ತು ಭೂವಿಜ್ಞಾನ ಇಲಾಖೆಯ  ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಕುಂದಾಪುರ ತಾಲೂಕು ತ್ರಾಸಿ,  ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ  ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ  ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ..

ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಮ ದೇವಸ್ಥಾನದ  ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್  ಲಾರಿಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ. ತ್ರಾಸಿ ವ್ಯಾಪ್ತಿಯ ಅನಧಿಕೃತ ಮರಳು ದಕ್ಕೆಗಳಿಗೆ ದಾಳಿಯಾಗುತ್ತಿದ್ದಂತೆ, ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ , ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲೂಕು  ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೂವಿಜ್ಞಾನಿಯವರು ತಿಳಿಸಿರುತ್ತಾರೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ  ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಸದರಿ  ಲಾರಿಗಳನ್ನು  ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು