11:08 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ

14/02/2023, 21:55

ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ ಮಾತನಾಡುವ 25 ಲಕ್ಷಕ್ಕೂ ಹೆಚ್ಚು ಜನರಿದ್ದು, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ ಅಗತ್ಯವಿದೆ ಎಂದು
ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಒತ್ತಾಯಿಸಿದರು.

ಅವರು ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಸರಕಾರದ ಗಮನ ಸೆಳೆದರು.ಕುಂದಾಪುರವು ರಾಜ್ಯ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಬುತ ಕೊಡುಗೆ ನೀಡಿದ ಊರು.
ಜನರ ಆಟ ಪಾಠಗಳಲ್ಲಿ, ಕೃಷಿ, ಮೀನುಗಾರಿಕೆ ಚಟುವಟಿಕೆಗಳಲ್ಲಿ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕಂಬಳ, ಕೋಲ, ಹೋಳಿ ಆಚರಣೆಗಳಲ್ಲಿ ಕುಂದಾಪ್ರ ಕನ್ನಡ ಭಾಷೆ ಸೊಬಗು ಕಾಣಸಿಗುತ್ತದೆ. ತಾಲ್ಲೂಕು ಬದಲಾದಾಗ ಕುಲಕಸಬುಗಳಿಗೆ ಅನುಗುಣವಾಗಿ ಕೆಲವು ಶಬ್ದಗಳು ಬದಲಾದರೂ ಕುಂದ ಕನ್ನಡ ಸಮೃದ್ಧಿ ಕಾಣುತ್ತದೆ ಎಂದು ಅವರು ಬಣ್ಣಿಸಿದರು.

ಒಂದು ಶತಮಾನದಲ್ಲಿ ಕುಂದ ಕನ್ನಡ ಭಾಷೆಯ ಬಳಕೆಗಳ ಸ್ಪಷ್ಟ ದಾಖಲೆ ಸಿಗುತ್ತದೆ. ತಮ್ಮ ಸಾಹಿತ್ಯದಲ್ಲಿ, ಪಾತ್ರಗಳ ಆಡು ಮಾತಿನಲ್ಲಿ, ಕುಂದಾಪ್ರ ಕನ್ನಡವನ್ನೇ ಬಳಕೆ ಮಾಡಿ ವೈದೇಹಿ, ಮಿತ್ರಾ ವೆಂಕಟರಾಜ್, ಗಾಯತ್ರಿ ನಾವಡ, ಮಾಧುರಿಕೃಷ್ಣ, ವರಮಹಾಲಕ್ಷ್ಮೀ ಹೊಳ್ಳ ಮುಂತಾದವರು ಯಶಸ್ವಿಯಾಗಿದ್ದಾರೆ ಎಂದು ಡಾ. ಭಂಡಾರಿ ಸದನದ ಗಮನ ಸೆಳೆದರು.
ರಾಜ್ಯದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಭಾಷೆಗಳಿಗೇ ಅಕಾಡೆಮಿಗಳು ರಚನೆಯಾಗಿರುವಾಗ, ಬಹು ಸಮುದಾಯದ ವಿಸ್ತಾರವಾದ ಪ್ರದೇಶದಲ್ಲಿ ವ್ಯಾಪಿಸಿರುವ 25 ಲಕ್ಷಕ್ಕೂ ಹೆಚ್ಚು ಜನರ ಹೃದಯ ಭಾಷೆಯಾದ ಕುಂದಾಪುರ ಕನ್ನಡಕ್ಕೆ ಜನರು ಹೋರಾಟಕ್ಕೆ ಇಳಿಯುವ ಮೊದಲೇ ಅಕಾಡೆ‌ಮಿ ಸ್ಥಾಪಿಸುವ ಅನಿವಾರ್ಯತೆ ಇದೆ. ಆದ್ದರಿಂದ 25 ಲಕ್ಷ ಜನರ ಆಶಯದಂತೆ ‘ಕುಂದಾಪುರ ಕನ್ನಡ ಭಾಷಾ ಅಕಾಡಮಿ’ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು