1:18 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ

14/02/2023, 21:55

ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ ಮಾತನಾಡುವ 25 ಲಕ್ಷಕ್ಕೂ ಹೆಚ್ಚು ಜನರಿದ್ದು, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ ಅಗತ್ಯವಿದೆ ಎಂದು
ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಒತ್ತಾಯಿಸಿದರು.

ಅವರು ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಸರಕಾರದ ಗಮನ ಸೆಳೆದರು.ಕುಂದಾಪುರವು ರಾಜ್ಯ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಬುತ ಕೊಡುಗೆ ನೀಡಿದ ಊರು.
ಜನರ ಆಟ ಪಾಠಗಳಲ್ಲಿ, ಕೃಷಿ, ಮೀನುಗಾರಿಕೆ ಚಟುವಟಿಕೆಗಳಲ್ಲಿ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕಂಬಳ, ಕೋಲ, ಹೋಳಿ ಆಚರಣೆಗಳಲ್ಲಿ ಕುಂದಾಪ್ರ ಕನ್ನಡ ಭಾಷೆ ಸೊಬಗು ಕಾಣಸಿಗುತ್ತದೆ. ತಾಲ್ಲೂಕು ಬದಲಾದಾಗ ಕುಲಕಸಬುಗಳಿಗೆ ಅನುಗುಣವಾಗಿ ಕೆಲವು ಶಬ್ದಗಳು ಬದಲಾದರೂ ಕುಂದ ಕನ್ನಡ ಸಮೃದ್ಧಿ ಕಾಣುತ್ತದೆ ಎಂದು ಅವರು ಬಣ್ಣಿಸಿದರು.

ಒಂದು ಶತಮಾನದಲ್ಲಿ ಕುಂದ ಕನ್ನಡ ಭಾಷೆಯ ಬಳಕೆಗಳ ಸ್ಪಷ್ಟ ದಾಖಲೆ ಸಿಗುತ್ತದೆ. ತಮ್ಮ ಸಾಹಿತ್ಯದಲ್ಲಿ, ಪಾತ್ರಗಳ ಆಡು ಮಾತಿನಲ್ಲಿ, ಕುಂದಾಪ್ರ ಕನ್ನಡವನ್ನೇ ಬಳಕೆ ಮಾಡಿ ವೈದೇಹಿ, ಮಿತ್ರಾ ವೆಂಕಟರಾಜ್, ಗಾಯತ್ರಿ ನಾವಡ, ಮಾಧುರಿಕೃಷ್ಣ, ವರಮಹಾಲಕ್ಷ್ಮೀ ಹೊಳ್ಳ ಮುಂತಾದವರು ಯಶಸ್ವಿಯಾಗಿದ್ದಾರೆ ಎಂದು ಡಾ. ಭಂಡಾರಿ ಸದನದ ಗಮನ ಸೆಳೆದರು.
ರಾಜ್ಯದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಭಾಷೆಗಳಿಗೇ ಅಕಾಡೆಮಿಗಳು ರಚನೆಯಾಗಿರುವಾಗ, ಬಹು ಸಮುದಾಯದ ವಿಸ್ತಾರವಾದ ಪ್ರದೇಶದಲ್ಲಿ ವ್ಯಾಪಿಸಿರುವ 25 ಲಕ್ಷಕ್ಕೂ ಹೆಚ್ಚು ಜನರ ಹೃದಯ ಭಾಷೆಯಾದ ಕುಂದಾಪುರ ಕನ್ನಡಕ್ಕೆ ಜನರು ಹೋರಾಟಕ್ಕೆ ಇಳಿಯುವ ಮೊದಲೇ ಅಕಾಡೆ‌ಮಿ ಸ್ಥಾಪಿಸುವ ಅನಿವಾರ್ಯತೆ ಇದೆ. ಆದ್ದರಿಂದ 25 ಲಕ್ಷ ಜನರ ಆಶಯದಂತೆ ‘ಕುಂದಾಪುರ ಕನ್ನಡ ಭಾಷಾ ಅಕಾಡಮಿ’ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು