9:21 PM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಕುಂದಾಪುರ: ರಿವಾಲ್ವರ್ ತೋರಿಸಿ ಅಪಹರಿಸಿ ಮೊಬೈಲ್ ಅಂಗಡಿ ಮಾಲೀಕನಿಂದ ಲಕ್ಷಾಂತರ ರೂಪಾಯಿ ಲೂಟಿಗೈದ ದುಷ್ಕರ್ಮಿಗಳು

22/09/2021, 23:05

ಕುಂದಾಪುರ(reporterkarnataka.com): ಮೊಬೈಲ್ ಅಂಗಡಿ ಮಾಲೀಕನಿಗೆ ದುಷ್ಕರ್ಮಿಗಳ ತಂಡವೊಂದು ರಿವಾಲ್ವರ್ ತೋರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ಸುಲಿಗೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.  

ಬೈಂದೂರಿನ ಮುಸ್ತಾಫ್ ಎಂಬವರು ನಗದು ಹಾಗೂ ಸೊತ್ತು ಕಳೆದುಕೊಂಡ ಮೊಬೈಲ್ ಅಂಗಡಿ ಮಾಲೀಕ. ಅವರು ಎಂದಿನಂತೆ ಸೆ.17ರಂದು ರಾತ್ರಿ ಶಾಪ್ ಬಂದ್ ಮಾಡಿ ಕುಂದಾಪುರದ ಫ್ಲ್ಯಾಟ್ ಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಮೂವರೊಂದಿಗೆ ಬಂದ ಮುಕ್ತಾರ್ ಎಂಬಾತ ಮುಸ್ತಾಫ್ ನನ್ನು ಅಡ್ಡಗಟ್ಟಿ ಕಾರಿನೊಳಗೆ ಎಳೆದೊಯ್ದಿದ್ದು, ಬಂದೂಕು ತೋರಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಹೋಗುವ ದಾರಿಮಧ್ಯೆ ಆರೋಪಿಗಳು ಬೆಂಗಳೂರಿನ ಎಟಿಎಂ ಹಾಗೂ ಸ್ವೈಪಿಂಗ್ ಮೆಷಿನ್ ನಿಂದ ₹ 3,14,100 ಡ್ರಾ ಮಾಡಿಕೊಂಡಿದ್ದಾರೆ. ಬಳಿಕ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ, ಮುಸ್ತಾಫ್ ಬಳಿಯಿಂದ ಮೊಬೈಲ್ ವಶಕ್ಕೆ ಪಡೆದ ಅರೋಪಿಗಳು, ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ತಮ್ಮ ಖಾತೆಗೆ ₹ 50 ಸಾವಿರ ಜಮಾ ಮಾಡಿಕೊಂಡಿದ್ದರು. ಚೆಕ್ ಬುಕ್ ಪಡೆದುಕೊಂಡು ಸಹಿ ಮಾಡಲು ಹೇಳಿದ್ದಾರೆ. ಅಲ್ಲದೆ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ದಾಖಲೆ, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಕೊಡುವುದಿಲ್ಲ ಬೆದರಿಸಿದ್ದಾರೆ. ಬಳಿಕ ಸೆ.18 ರಂದು ರಾತ್ರಿ 9.30ರ ವೇಳೆಗೆ ಆರೋಪಿಗಳು ಮುಸ್ತಾಫ್ ಅವರನ್ನು ಬಿಟ್ಟಿದ್ದಾರೆ. ಆರೋಪಿಗಳು ಮುಸ್ತಾಫ್ ಅವರಿಂದ ಒಟ್ಟು ₹ 4,64,175 ನಗದು ಹಾಗೂ ₹1,00,000 ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮುಸ್ತಾಫ್ ದೂರು ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು