7:42 PM Sunday10 - August 2025
ಬ್ರೇಕಿಂಗ್ ನ್ಯೂಸ್
Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕುಂದಾಪುರ: ರಿವಾಲ್ವರ್ ತೋರಿಸಿ ಅಪಹರಿಸಿ ಮೊಬೈಲ್ ಅಂಗಡಿ ಮಾಲೀಕನಿಂದ ಲಕ್ಷಾಂತರ ರೂಪಾಯಿ ಲೂಟಿಗೈದ ದುಷ್ಕರ್ಮಿಗಳು

22/09/2021, 23:05

ಕುಂದಾಪುರ(reporterkarnataka.com): ಮೊಬೈಲ್ ಅಂಗಡಿ ಮಾಲೀಕನಿಗೆ ದುಷ್ಕರ್ಮಿಗಳ ತಂಡವೊಂದು ರಿವಾಲ್ವರ್ ತೋರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ಸುಲಿಗೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.  

ಬೈಂದೂರಿನ ಮುಸ್ತಾಫ್ ಎಂಬವರು ನಗದು ಹಾಗೂ ಸೊತ್ತು ಕಳೆದುಕೊಂಡ ಮೊಬೈಲ್ ಅಂಗಡಿ ಮಾಲೀಕ. ಅವರು ಎಂದಿನಂತೆ ಸೆ.17ರಂದು ರಾತ್ರಿ ಶಾಪ್ ಬಂದ್ ಮಾಡಿ ಕುಂದಾಪುರದ ಫ್ಲ್ಯಾಟ್ ಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಮೂವರೊಂದಿಗೆ ಬಂದ ಮುಕ್ತಾರ್ ಎಂಬಾತ ಮುಸ್ತಾಫ್ ನನ್ನು ಅಡ್ಡಗಟ್ಟಿ ಕಾರಿನೊಳಗೆ ಎಳೆದೊಯ್ದಿದ್ದು, ಬಂದೂಕು ತೋರಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಹೋಗುವ ದಾರಿಮಧ್ಯೆ ಆರೋಪಿಗಳು ಬೆಂಗಳೂರಿನ ಎಟಿಎಂ ಹಾಗೂ ಸ್ವೈಪಿಂಗ್ ಮೆಷಿನ್ ನಿಂದ ₹ 3,14,100 ಡ್ರಾ ಮಾಡಿಕೊಂಡಿದ್ದಾರೆ. ಬಳಿಕ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ, ಮುಸ್ತಾಫ್ ಬಳಿಯಿಂದ ಮೊಬೈಲ್ ವಶಕ್ಕೆ ಪಡೆದ ಅರೋಪಿಗಳು, ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ತಮ್ಮ ಖಾತೆಗೆ ₹ 50 ಸಾವಿರ ಜಮಾ ಮಾಡಿಕೊಂಡಿದ್ದರು. ಚೆಕ್ ಬುಕ್ ಪಡೆದುಕೊಂಡು ಸಹಿ ಮಾಡಲು ಹೇಳಿದ್ದಾರೆ. ಅಲ್ಲದೆ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ದಾಖಲೆ, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಕೊಡುವುದಿಲ್ಲ ಬೆದರಿಸಿದ್ದಾರೆ. ಬಳಿಕ ಸೆ.18 ರಂದು ರಾತ್ರಿ 9.30ರ ವೇಳೆಗೆ ಆರೋಪಿಗಳು ಮುಸ್ತಾಫ್ ಅವರನ್ನು ಬಿಟ್ಟಿದ್ದಾರೆ. ಆರೋಪಿಗಳು ಮುಸ್ತಾಫ್ ಅವರಿಂದ ಒಟ್ಟು ₹ 4,64,175 ನಗದು ಹಾಗೂ ₹1,00,000 ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮುಸ್ತಾಫ್ ದೂರು ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು