6:03 PM Tuesday24 - September 2024
ಬ್ರೇಕಿಂಗ್ ನ್ಯೂಸ್
ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!!

ಇತ್ತೀಚಿನ ಸುದ್ದಿ

ಕುಂದಾಪುರ: ರಿವಾಲ್ವರ್ ತೋರಿಸಿ ಅಪಹರಿಸಿ ಮೊಬೈಲ್ ಅಂಗಡಿ ಮಾಲೀಕನಿಂದ ಲಕ್ಷಾಂತರ ರೂಪಾಯಿ ಲೂಟಿಗೈದ ದುಷ್ಕರ್ಮಿಗಳು

22/09/2021, 23:05

ಕುಂದಾಪುರ(reporterkarnataka.com): ಮೊಬೈಲ್ ಅಂಗಡಿ ಮಾಲೀಕನಿಗೆ ದುಷ್ಕರ್ಮಿಗಳ ತಂಡವೊಂದು ರಿವಾಲ್ವರ್ ತೋರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಸೊತ್ತುಗಳನ್ನು ಸುಲಿಗೆ ಮಾಡಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.  

ಬೈಂದೂರಿನ ಮುಸ್ತಾಫ್ ಎಂಬವರು ನಗದು ಹಾಗೂ ಸೊತ್ತು ಕಳೆದುಕೊಂಡ ಮೊಬೈಲ್ ಅಂಗಡಿ ಮಾಲೀಕ. ಅವರು ಎಂದಿನಂತೆ ಸೆ.17ರಂದು ರಾತ್ರಿ ಶಾಪ್ ಬಂದ್ ಮಾಡಿ ಕುಂದಾಪುರದ ಫ್ಲ್ಯಾಟ್ ಗೆ ಹೋಗುತ್ತಿದ್ದರು. ಈ ವೇಳೆ ಕಾರಿನಲ್ಲಿ ಮೂವರೊಂದಿಗೆ ಬಂದ ಮುಕ್ತಾರ್ ಎಂಬಾತ ಮುಸ್ತಾಫ್ ನನ್ನು ಅಡ್ಡಗಟ್ಟಿ ಕಾರಿನೊಳಗೆ ಎಳೆದೊಯ್ದಿದ್ದು, ಬಂದೂಕು ತೋರಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಹೋಗುವ ದಾರಿಮಧ್ಯೆ ಆರೋಪಿಗಳು ಬೆಂಗಳೂರಿನ ಎಟಿಎಂ ಹಾಗೂ ಸ್ವೈಪಿಂಗ್ ಮೆಷಿನ್ ನಿಂದ ₹ 3,14,100 ಡ್ರಾ ಮಾಡಿಕೊಂಡಿದ್ದಾರೆ. ಬಳಿಕ ಬೆಂಗಳೂರಿನ ಸರ್ಜಾಪುರದ ವಸತಿಗೃಹವೊಂದಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ, ಮುಸ್ತಾಫ್ ಬಳಿಯಿಂದ ಮೊಬೈಲ್ ವಶಕ್ಕೆ ಪಡೆದ ಅರೋಪಿಗಳು, ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ತಮ್ಮ ಖಾತೆಗೆ ₹ 50 ಸಾವಿರ ಜಮಾ ಮಾಡಿಕೊಂಡಿದ್ದರು. ಚೆಕ್ ಬುಕ್ ಪಡೆದುಕೊಂಡು ಸಹಿ ಮಾಡಲು ಹೇಳಿದ್ದಾರೆ. ಅಲ್ಲದೆ, ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು. ಇಲ್ಲದಿದ್ದರೆ ದಾಖಲೆ, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಕೊಡುವುದಿಲ್ಲ ಬೆದರಿಸಿದ್ದಾರೆ. ಬಳಿಕ ಸೆ.18 ರಂದು ರಾತ್ರಿ 9.30ರ ವೇಳೆಗೆ ಆರೋಪಿಗಳು ಮುಸ್ತಾಫ್ ಅವರನ್ನು ಬಿಟ್ಟಿದ್ದಾರೆ. ಆರೋಪಿಗಳು ಮುಸ್ತಾಫ್ ಅವರಿಂದ ಒಟ್ಟು ₹ 4,64,175 ನಗದು ಹಾಗೂ ₹1,00,000 ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮುಸ್ತಾಫ್ ದೂರು ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು