12:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು