8:39 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು