4:11 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು