3:12 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು