10:44 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ

11/11/2021, 10:25

ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ.

ರಾತ್ರಿ ಸುಮಾರು 12.30ರ  ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2 ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ  ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿದ್ದು ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. 

ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು