2:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ

11/11/2021, 10:25

ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ.

ರಾತ್ರಿ ಸುಮಾರು 12.30ರ  ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2 ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ  ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿದ್ದು ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. 

ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು