5:12 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

02/06/2024, 13:14

ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕುಂದಾಪುರ ತಾಲೂಕಿನ ಅಮಾವಾಸೆಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯ 25ರ ಹರೆಯದ ಉದ್ಯಮಿ ಶ್ರೇಯಸ್ ನಾಯ್ಕ ಎಂಬಾತನೇ ಈ ಮರಿ ಪ್ರಜ್ವಲ್ ರೇವಣ್ಣ. ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಈತನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕೇಸು ದಾಖಲಾಗುತ್ತಿದ್ದಂತೆ ಶ್ರೇಯಸ್ ತಲೆ ಮರೆಸಿಕೊಂಡಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಅದನ್ನು ಮೊಬೈಲ್ ನಲ್ಲಿ ಶೂಟಿಂಗ್ ಮಾಡಿಕೊಂಡಿದ್ದ. ನಂತರ ಆ ವೀಡಿಯೊವನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶ್ರೇಯಸ್ ಇದೇ ರೀತಿ ಹಲವು ಮಂದಿ ಕಾಲೇಜು ವಿದ್ಯಾರ್ಥಿ ನಿಯರಿಗೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು