3:55 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

02/06/2024, 13:14

ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕುಂದಾಪುರ ತಾಲೂಕಿನ ಅಮಾವಾಸೆಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯ 25ರ ಹರೆಯದ ಉದ್ಯಮಿ ಶ್ರೇಯಸ್ ನಾಯ್ಕ ಎಂಬಾತನೇ ಈ ಮರಿ ಪ್ರಜ್ವಲ್ ರೇವಣ್ಣ. ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಈತನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕೇಸು ದಾಖಲಾಗುತ್ತಿದ್ದಂತೆ ಶ್ರೇಯಸ್ ತಲೆ ಮರೆಸಿಕೊಂಡಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಅದನ್ನು ಮೊಬೈಲ್ ನಲ್ಲಿ ಶೂಟಿಂಗ್ ಮಾಡಿಕೊಂಡಿದ್ದ. ನಂತರ ಆ ವೀಡಿಯೊವನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶ್ರೇಯಸ್ ಇದೇ ರೀತಿ ಹಲವು ಮಂದಿ ಕಾಲೇಜು ವಿದ್ಯಾರ್ಥಿ ನಿಯರಿಗೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು