2:09 AM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

ಕುರ್ಲಾ: ಜು.17ರಂದು ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022; ಪಮ್ಮಿ ಕೊಡಿಯಾಲ್ ಬೈಲ್ ಸಹಿತ 9 ಮಂದಿಗೆ ಸನ್ಮಾನ

14/07/2022, 19:18

ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ಜುಲೈ 17ರಂದು ನಡೆಯಲಿದೆ.

ಸಮಾರಂಭದಲ್ಲಿ ರಾಷ್ಟಭಕ್ತಿ, ನಾಡಪ್ರೀತಿ, ಕನ್ನಡದ ಕಂಪು ಬೀರಲಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಮಂದಿಯನ್ನು ಸನ್ಮಾನಿಸಲಾಗುವುದು. ಮುಂಬಯಿ ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಹೆಸರು, ಕವಯತ್ರಿ, ಲೇಖಕಿ ಡಾ. ಸುನೀತಾ ಶೆಟ್ಟಿ, ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ವೈದ್ಯಕೀಯ ಕ್ಷೇತ್ರದ ಡಾ. ಸುರೇಶ್ ರಾವ್, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ಪ್ರಗತಿಪರ ಕೃಷಿಕ ಪ್ರಭಾಕರ ಕಲ್ಲೂರಾಯ ಹಾಗೂ ವಾಸ್ತು ತಜ್ಞ ಮಾರ್ತಾಂಡ ಪಂಡಿತ್ ನವೀನ್ ಚಂದ್ರ ಸನಿಲ್ ಅವರನ್ನು ಸನ್ಮಾನಿಸಲಾಗುವುದು.

ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರು ಪ್ರಸ್ತುತ ಕರ್ನಾಟಕದ ಜನಪದ ಅಕಾಡೆಮಿಯ ದ.ಕ.ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಓಬಿಸಿ ಮಹಾಸಭಾದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಂಗಳೂರು ವಿವಿ ತುಳು ಅಧ್ಯಯನ ಪೀಠದ ಸದಸ್ಯರೂ ಹೌದು. ಪಮ್ಮಿ ಕೊಡಿಯಾಲ್ ಬೈಲ್ ಅವರು ರಂಗಾಸಕ್ತರು, ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿಯೂ ಅವರಿಗೆ ಅಪಾರ ಒಲವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು