5:47 PM Sunday14 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

14/06/2026, 17:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ಮೊನ್ನೆ ದಿನ ಕುಶಾಲನಗರದ ರಸೂಲ್ ಲೇಔಟ್ ಬಳಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿ ಜಲ ಸಮಾಧಿ ಆಗಿದ್ದ ನಾಗಾಲ್ಯಾಂಡ್ ಮೂಲದ ಯುವಕನ ಮೃತ ದೇಹ ಇಂದು ಪತ್ತೆ ಆಗಿದೆ. ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಮುಳುಗು ತಜ್ಞರು ಇಂದು ಕೂಡ ಕಾರ್ಯಾಚರಣೆಯನ್ನು ಮುಂದುವರೆಸಿ ಮುತ್ತಿನ ಮುಳ್ಳುಸೋಗೆ ಬಳಿ ಹರಿಯುತಿರುವ ಕಾವೇರಿ ನದಿಯಲ್ಲಿ ಗಿಡಗಳ ನಡುವೆ ಸಿಲುಕಿಕೊಂಡಿದ್ದ ಯುವಕನ ಮೃತ ದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿ ಯಾಗಿದ್ದಾರೆ.
ಕುಶಾಲನಗರದ ಹೋಟೆಲ್ ಒಂದರಲ್ಲಿ ಕೆಲಸ‌ ನಿರ್ವಹಿಸುತ್ತಿದ್ದ
ನಾಗಾಲಾಂಡ್ ರಾಜ್ಯದ ಲಾಂಗ್ ಟಕ್ ಕೊನ್ಯಕ್ ಮತ್ತು ಹಾಂಗ್ ಕಪ್ ಕೊನ್ಯಕ್ ಎಂಬ ಇಬ್ಬರು ಯುವಕರು ಹಾಗೂ ಓರ್ವ ಯುವತಿ ಮೊನ್ನೆ ಸಂಜೆ ಕುಶಾಲನಗರ ರಸೂಲ್ ಲೇಔಟ್ ಬಳಿ ನದಿಯತ್ತ ತೆರಳಿದ್ದರು. ಇವರ ಪೈಕಿ ಇಬ್ಬರು ಯುವಕರು ನದಿಗಿಳಿದಿದ್ದಾರೆ. ಈ ಸಂದರ್ಭ ಆಳವಾದ ಗುಂಡಿಯಲ್ಲಿ ಮುಳುಗಿ ಯುವಕರು ಜಲ ಸಮಾಧಿ ಆಗಿದ್ದರು. ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು