2:19 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು