1:24 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು