4:46 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು