5:42 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು