11:04 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಮುಂಡ್ಕೂರು ಪಡಿತ್ತಾರ್ ಸೇತುವೆ: ಕಿತ್ತು ಹೋದ ಸಿಮೆಂಟ್, ತುಕ್ಕು ಹಿಡಿದ ಕಬ್ಬಿಣ!!

01/09/2023, 11:32

ಕಾರ್ಕಳ(reporterkarnataka.com): ಇಲ್ಲಿನ ಮುಂಡ್ಕೂರು ಗ್ರಾಮದ ಪಡಿತ್ತಾರ್ ಎಂಬಲ್ಲಿ ಸೇತುವೆ ಕಾಂಕ್ರೀಟ್ ಕಿತ್ತು ಹೋಗಿದ್ದು ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕುಸಿಯುವ ಹಂತದಲ್ಲಿದೆ.
ಪಡಿತ್ತಾರು ಸೇತುವೆ ಮೇಲಿನಿಂದ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬೆಳ್ಮಣ್, ಕಿನ್ನಿಗೋಳಿ, ಮೂಡಬಿದ್ರೆ ಸಂಪರ್ಕಿಸಲು ಹತ್ತಿರದ ಹೆದ್ದಾರಿಯಾಗಿದೆ.. ಬಜಪೆ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಾವಿರಾರು ಭಕ್ತರು ಪ್ರವಾಸಿಗರು, ಪ್ರಯಾಣಿಕರು ಇದೇ ರಸ್ತೆಯಲ್ಲಿ ಸಾಗುತ್ತಾರೆ.
ಬೆಳ್ಮಣ್, ನಂದಳಿಕೆ ಸೇರಿದಂತೆ ಕಲ್ಲುಕೋರೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಲ್ಲು ಜಲ್ಲಿ ಸಾಗಾಣಿಕೆ ಟಿಪ್ಪರ್ ಗಳು ಈ ರಸ್ತೆಯಲ್ಲೆ ಸಂಚರಿಸುತ್ತವೆ.
ಅಪಾಯ ಕಟ್ಟಿಟ್ಟ ಬುತ್ತಿ: ಈ ಸೇತುವೆ ಕೆಳಭಾಗದಲ್ಲಿ ಭಾಗದಲ್ಲಿ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು ಕಾಂಕ್ರೀಟ್ ಕಿತ್ತು ಹೋಗಿದೆ. ಹೆಚ್ಚಿನ ಭಾರ ಹೊರುವ ಟಿಪ್ಪರ್ ಗಳು ನಿತ್ಯ ರಸ್ತೆಯಲ್ಲಿ ಸಾಗುವಾಗ ಯಾವುದೇ ಕ್ಷಣದಲ್ಲಿ ಕುಸಿತವಾಗಬಹುದು.
ತೇಪೆ ಕಾರ್ಯ: ಈ ಸೇತುವೆ ಹಳೆಯ ಸೇತುವೆಯಾಗಿದ್ದು ಅನೇಕ ವರ್ಷಗಳಿಂದ ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಯುತ್ತಲಿದೆ.. ಆದರೆ ಜನ ವಾಹನಗಳ ಸಂಚಾರದಿಂದಲೆ ಮತ್ತೆ ಕಾಂಕ್ರೀಟ್ ಕಿತ್ತು ಹೋಗುತ್ತಿದೆ.ಆದರೆ ಹೊಸ ಸೇತುವೆ ನಿರ್ಮಾಣ ವಾದರೆ ಮಾತ್ರ ಅಪಘಾತ ಮುಕ್ತವಾಗಬಹುದು ಎನ್ನುವುದು ಸ್ಥಳೀಯರು ಆಶಾಭಾವ ವ್ಯಕ್ತಪಡಿಸಿದ್ದಾರೆ.
ಕಾಂಕ್ರೀಟ್ ಹಾಕಿ ತೇಪೆ ಕಾರ್ಯ ನಡೆಸಲಾಗಿದೆ.
ಹೊಸ ಸೇತುವೆ ನಿರ್ಮಾಣ ಮಾಡಲು ಇಲಾಖೆ ಯೊಡನೆ ಮಾತುಕತೆ ನಡೆಸಲಾಗುತ್ತಿದೆ‌ ಎಂದು
ಲೋಕೋಪಯೋಗಿ ಇಲಾಖೆ ಎಂಜಿನಿಯರ್
ಮಿಥುನ್ ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು