12:43 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ

30/11/2023, 19:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡಿ, ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.


ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು