2:18 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ

30/11/2023, 19:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡಿ, ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.


ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು