9:10 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ

30/11/2023, 19:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡಿ, ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು, ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.


ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ. ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ. ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು