6:14 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ಅತ್ತಿಗೆರೆ ಅಂಗನವಾಡಿ ಕೇಂದ್ರ: ಹಾವು- ಚೇಳುಗಳ ಕಾಟ

29/08/2024, 18:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.
ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.



ಅಂಗನವಾಡಿ ಶಿಥಿಲ ಆಗಿರುವುದರಿಂದ ಇಲ್ಲಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಇಲ್ಲಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಿಥಿಲಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ , ಹೊಸದಾಗಿ ಕಟ್ಟಡವನ್ನು ನಿರ್ಮಿಸಬೇಕು ಅಲ್ಲಿಯವರೆಗೆ , ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸಬೇಕು ಎನ್ನುವ ಅಭಿಪ್ರಾಯ ಹಲವರದು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಈ ನಿಟ್ಟಿನಲ್ಲಿ ಗಮನ ಹರಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು