1:51 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ಅತ್ತಿಗೆರೆ ಅಂಗನವಾಡಿ ಕೇಂದ್ರ: ಹಾವು- ಚೇಳುಗಳ ಕಾಟ

29/08/2024, 18:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.
ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.



ಅಂಗನವಾಡಿ ಶಿಥಿಲ ಆಗಿರುವುದರಿಂದ ಇಲ್ಲಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಇಲ್ಲಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಿಥಿಲಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ , ಹೊಸದಾಗಿ ಕಟ್ಟಡವನ್ನು ನಿರ್ಮಿಸಬೇಕು ಅಲ್ಲಿಯವರೆಗೆ , ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸಬೇಕು ಎನ್ನುವ ಅಭಿಪ್ರಾಯ ಹಲವರದು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಈ ನಿಟ್ಟಿನಲ್ಲಿ ಗಮನ ಹರಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು