5:49 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ಅತ್ತಿಗೆರೆ ಅಂಗನವಾಡಿ ಕೇಂದ್ರ: ಹಾವು- ಚೇಳುಗಳ ಕಾಟ

29/08/2024, 18:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.
ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.



ಅಂಗನವಾಡಿ ಶಿಥಿಲ ಆಗಿರುವುದರಿಂದ ಇಲ್ಲಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಇಲ್ಲಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಿಥಿಲಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ , ಹೊಸದಾಗಿ ಕಟ್ಟಡವನ್ನು ನಿರ್ಮಿಸಬೇಕು ಅಲ್ಲಿಯವರೆಗೆ , ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸಬೇಕು ಎನ್ನುವ ಅಭಿಪ್ರಾಯ ಹಲವರದು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಈ ನಿಟ್ಟಿನಲ್ಲಿ ಗಮನ ಹರಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು