7:29 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ಅತ್ತಿಗೆರೆ ಅಂಗನವಾಡಿ ಕೇಂದ್ರ: ಹಾವು- ಚೇಳುಗಳ ಕಾಟ

29/08/2024, 18:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಅಂಗನವಾಡಿ ಕೇಂದ್ರ ತೀರಾ ಶಿಥಿಲಾವಸ್ತೆಯಲ್ಲಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.
ಅಂಗನವಾಡಿಯ ದುಃಸ್ಥಿತಿ ಬಗ್ಗೆ ಅನೇಕ ಬಾರಿ ಸ್ಥಳೀಯ ಆಡಳಿತದ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನ ಆಗಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.



ಅಂಗನವಾಡಿ ಶಿಥಿಲ ಆಗಿರುವುದರಿಂದ ಇಲ್ಲಿಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.
ಸುತ್ತಮುತ್ತ ಪೊದೆಗಳು ಇರುವುದರಿಂದ ಹಾವುಗಳ ಕಾಟವು ಅಧಿಕವಾಗಿದ್ದು ಕಳೆದ ಒಂದು ವಾರದಲ್ಲಿ ಮೂರು ಬಾರಿ ಇಲ್ಲಿ ಹಾವು ಪತ್ತೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಿಥಿಲಗೊಂಡ ಕಟ್ಟಡವನ್ನು ದುರಸ್ತಿಪಡಿಸುವ ಬದಲಾಗಿ , ಹೊಸದಾಗಿ ಕಟ್ಟಡವನ್ನು ನಿರ್ಮಿಸಬೇಕು ಅಲ್ಲಿಯವರೆಗೆ , ತಾತ್ಕಾಲಿಕವಾಗಿ ಅಂಗನವಾಡಿ ಕೇಂದ್ರವನ್ನು ಸೂಕ್ತ ಸ್ಥಳಕ್ಕೆ ವರ್ಗಾಯಿಸಬೇಕು ಎನ್ನುವ ಅಭಿಪ್ರಾಯ ಹಲವರದು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಈ ನಿಟ್ಟಿನಲ್ಲಿ ಗಮನ ಹರಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು