5:43 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕುತುಬ್‌ ಮಿನಾರ್‌: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..?

19/05/2022, 12:51

ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್‌ ಮಿನಾರ್‌ ನಿರ್ಮಿಸಿದ್ದು ಕುತುಬ್‌ ಉದ್‌ ದೀನ್‌ ಐಬಕ್‌ ಅಲ್ಲ ಎಂದು ಹೇಳಿದ್ದಾರೆ.

5ನೇ ಶತಮಾನದಲ್ಲಿ ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿದ್ದ  ವಿಕ್ರಮಾದಿತ್ಯ ಎಂಬ ರಾಜನು ಸೂರ್ಯನ ಪರಿವೀಕ್ಷಣೆಗೆ ಅದನ್ನು ನಿರ್ಮಾಣ ಮಾಡಿದ್ದಾನೆ. ಇದು ಕುತುಬ್ ಮಿನಾರ್ ಅಲ್ಲ ಸೂರ್ಯ ಗೋಪುರ (ವೀಕ್ಷಣಾ ಗೋಪುರ) ಎಂದು ಕರೆಯಲಾಗುತ್ತಿತ್ತು. ಈ ಬಗ್ಗೆ ಅನೇಕ ಪುರಾವೆಗಳಿವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದಾರೆ. ಎಎಸ್ ಐ ಪರವಾಗಿ ಹಲವು ಬಾರಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಕುತುಬ್‌ ಗೋಪುರವು 25 ಇಂಚು ಓರೆಯಾಗಿದೆ. ಸೂರ್ಯನನ್ನು ವೀಕ್ಷಿಸಲು ಅನುಕೂಲವಾಗಲೆಂದು ಈ ರಚನೆಯಿದೆ. ಜೂನ್‌ 21ರಂದು ಅಯನ ಸಂಕ್ರಾಂತಿಯ ನಡುವೆ ಆ ಪ್ರದೇಶದ ಮೇಲೆ ಕನಿಷ್ಟ ಅರ್ಧಗಂಟೆ ನೆರಳು ಬೀಳುವುದಿಲ್ಲ. ಇದು ವಿಜ್ಞಾನ ಮತ್ತು ಪುರಾತತ್ತ್ವ ಶಾಸ್ತ್ರದ ಸತ್ಯ. ಕುತುಬ್‌ ಮಿನಾರ್‌ ಗೂ ಅದರ ಪಕ್ಕದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಕುತುಬ್‌ ಮಿನಾರ್‌ ಎಂದು ಕರೆಯಲ್ಪಡುವ ಕಟ್ಟಡವು ಸ್ವತಂತ್ರ ರಚನೆಯಾಗಿದೆ. ಕುತುಬ್ ಮಿನಾರ್‌ನ ಬಾಗಿಲು ಕೂಡ ಉತ್ತರಕ್ಕೆ ಮುಖ ಮಾಡಿದೆ. ಇದು ರಾತ್ರಿ ಸಮಯದಲ್ಲಿ ಧ್ರುವ ನಕ್ಷತ್ರವನ್ನು ನೋಡುವುದನ್ನು ಸೂಚಿಸುತ್ತದೆ.


ಈ ಮಾತುಗಳನ್ನಾಡಿರುವ ಶರ್ಮಾ ಅವರು ಹಲವು ಬಾರಿ ಎಎಸ್ ಐ ಪರವಾಗಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು