11:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕುತುಬ್‌ ಮಿನಾರ್‌: ಪುರಾತತ್ವ ಇಲಾಖೆ ಮಾಜಿ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದೇನು..?

19/05/2022, 12:51

ಹೊಸದಿಲ್ಲಿ(reporterkarnataka.com): ಕುತುಬ್ ಮಿನಾರ್ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.ದೇಶದೆಲ್ಲೆಡೆ ಸ್ಮಾರಕಗಳ ಬಗ್ಗೆ ವಿವಾದಗಳು ಭುಗಿಲೇಳುತ್ತಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕರು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಅದೇನೆಂದರೆ ಕುತುಬ್‌ ಮಿನಾರ್‌ ನಿರ್ಮಿಸಿದ್ದು ಕುತುಬ್‌ ಉದ್‌ ದೀನ್‌ ಐಬಕ್‌ ಅಲ್ಲ ಎಂದು ಹೇಳಿದ್ದಾರೆ.

5ನೇ ಶತಮಾನದಲ್ಲಿ ದೆಹಲಿಯಲ್ಲಿ ಆಳ್ವಿಕೆ ನಡೆಸುತ್ತಿದ್ದ  ವಿಕ್ರಮಾದಿತ್ಯ ಎಂಬ ರಾಜನು ಸೂರ್ಯನ ಪರಿವೀಕ್ಷಣೆಗೆ ಅದನ್ನು ನಿರ್ಮಾಣ ಮಾಡಿದ್ದಾನೆ. ಇದು ಕುತುಬ್ ಮಿನಾರ್ ಅಲ್ಲ ಸೂರ್ಯ ಗೋಪುರ (ವೀಕ್ಷಣಾ ಗೋಪುರ) ಎಂದು ಕರೆಯಲಾಗುತ್ತಿತ್ತು. ಈ ಬಗ್ಗೆ ಅನೇಕ ಪುರಾವೆಗಳಿವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಧರಂವೀರ್ ಶರ್ಮಾ ಹೇಳಿದ್ದಾರೆ. ಎಎಸ್ ಐ ಪರವಾಗಿ ಹಲವು ಬಾರಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಕುತುಬ್‌ ಗೋಪುರವು 25 ಇಂಚು ಓರೆಯಾಗಿದೆ. ಸೂರ್ಯನನ್ನು ವೀಕ್ಷಿಸಲು ಅನುಕೂಲವಾಗಲೆಂದು ಈ ರಚನೆಯಿದೆ. ಜೂನ್‌ 21ರಂದು ಅಯನ ಸಂಕ್ರಾಂತಿಯ ನಡುವೆ ಆ ಪ್ರದೇಶದ ಮೇಲೆ ಕನಿಷ್ಟ ಅರ್ಧಗಂಟೆ ನೆರಳು ಬೀಳುವುದಿಲ್ಲ. ಇದು ವಿಜ್ಞಾನ ಮತ್ತು ಪುರಾತತ್ತ್ವ ಶಾಸ್ತ್ರದ ಸತ್ಯ. ಕುತುಬ್‌ ಮಿನಾರ್‌ ಗೂ ಅದರ ಪಕ್ಕದಲ್ಲಿರುವ ಮಸೀದಿಗೂ ಯಾವುದೇ ಸಂಬಂಧವಿಲ್ಲ. ಕುತುಬ್‌ ಮಿನಾರ್‌ ಎಂದು ಕರೆಯಲ್ಪಡುವ ಕಟ್ಟಡವು ಸ್ವತಂತ್ರ ರಚನೆಯಾಗಿದೆ. ಕುತುಬ್ ಮಿನಾರ್‌ನ ಬಾಗಿಲು ಕೂಡ ಉತ್ತರಕ್ಕೆ ಮುಖ ಮಾಡಿದೆ. ಇದು ರಾತ್ರಿ ಸಮಯದಲ್ಲಿ ಧ್ರುವ ನಕ್ಷತ್ರವನ್ನು ನೋಡುವುದನ್ನು ಸೂಚಿಸುತ್ತದೆ.


ಈ ಮಾತುಗಳನ್ನಾಡಿರುವ ಶರ್ಮಾ ಅವರು ಹಲವು ಬಾರಿ ಎಎಸ್ ಐ ಪರವಾಗಿ ಕುತುಬ್ ಮಿನಾರ್ ಸರ್ವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು