2:44 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕುಟುಂಬದ ದೈವ, ದೇವರ ಆರಾಧನೆಯಿಂದ ಒಳಿತು: ಕರಿಂಜೆ ಶ್ರೀ ಮುಕ್ತಾನಂದ ಸ್ವಾಮೀಜಿ 

26/11/2021, 18:27

ಮಂಗಳೂರು(reporterkarnataka.com) : ನಮ್ಮ ಕುಟುಂಬದ ದೈವ, ದೇವತಾರಾಧನೆ ಅಗತ್ಯವಾಗಿ ನಡೆಯಬೇಕಾಗಿದೆ. ನಮ್ಮ ಹಿರಿಯರು ಮಾಡಿಕೊಂಡು ಬಂದ ಸಂಪ್ರದಾಯ, ಕಟ್ಟುಕಟ್ಟಳೆಗಳನ್ನು ಪಾಲಿಸಿಕೊಂಡು ಬಂದಲ್ಲಿ ನಮಗೆ ಸುಖಃ ಸಮೃದ್ಧಿ ಸಿಗುತ್ತದೆ.  ಕುಟುಂಬದ ದೇವತಾಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮೂಡುಬಿದಿರೆ ಕರಿಂಜೆ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿ ಹೇಳಿದರು.

ಕೊಣಾಜೆ ಬೆಳ್ಮ ಅಡ್ಕರಮಜಲುವಿನ ಬೋಲ್ಡನ್‌ ಕುಟುಂಬಸ್ಥರ ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿದ ದೈವದ ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಪ್ರತಿಷ್ಠಾಪನೆ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ನಾವು ಎಷ್ಟು ಪೂಜೆ, ಪುನಸ್ಕಾರ ಮಾಡುತ್ತೇವೆನ್ನುವುದು ಮುಖ್ಯ ಅಲ್ಲ. ಅಂತರಂಗ ಶುದ್ಧಿ ಇಟ್ಟುಕೊಂಡು ದೈವಸ್ಥಾನದ ಪ್ರವೇಶಿಸೋಣ. ನನ್ನ ಜೊತೆಗೆ ನನ್ನ ಕುಟುಂಬದವರಿಗೂ ಒಳ್ಳೆಯದಾಗಲಿ ಎನ್ನುವ ಒಳ್ಳೆಯ ಮನಸ್ಸಿನಿಂದ ಒಂದು ಹೂವಿನ ಎಸಲು ಇಟ್ಟರೂ ದೈವ ದೇವರು ಸಂತೃಪ್ತರಾಗುತ್ತಾರೆ. ನಾವೆಲ್ಲರೂ ಒಳ್ಳೆಯ ಮನಸ್ಸಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಬೇಕು. ನಮ್ಮ ಮನಸ್ಸು, ನಾಲಗೆಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.


ದೈವದೇವರ ಕಾರ್ಯದಲ್ಲಿ ಯಾವುದೇ ಮನಕ್ಲೇಷಗಳನ್ನು ಇಟ್ಟುಕೊಂಡು ಪಾಲ್ಗೊಳ್ಳಬಾರದು.  ನಮ್ಮ ಜೀವನವನ್ನು ನೋಡಿ ಇನ್ನೊಬ್ಬರು ಕಲಿಯುವಂತಾಗಬೇಕು. ಸದಾ ಒಳ್ಳೆಯದನ್ನು ಮಾಡಬೇಕು. ಹೀಗಿದ್ದರೆ ಮಾತ್ರ ನಮ್ಮ ಬದುಕು ಸಾರ್ಥಕ. ಇಲ್ಲಿ ಜಗದೊಡೆಯ ದೇವರು. ಇಲ್ಲಿ ನಾನು ಎನ್ನುವುದನ್ನು ಬಿಟ್ಟು, ದೇವರು ನನ್ನಿಂದ ಈ ಸೇವೆ ಮಾಡಿಸಿದರು ಎನ್ನುವ ಸೇವೆಯನ್ನು ಮಾಡಿಸಿದರೇ ಅದೇ ಸಾರ್ಥಕ ಎಂದು ಹರಸಿದರು.



ನೂತನ ಮನೆಯಲ್ಲಿ ದೈವಗಳ ಪ್ರತಿಷ್ಠಾಪನೆ :  

ದೈವಗಳಿಗೆ ನಿರ್ಮಿಸಿದ ನೂತನ ದೈವದ ಗೃಹಪ್ರವೇಶವನ್ನು ಅಂಬ್ಲಮೊಗರು ಪ್ರಶಾಂತ್‌ ಉಡುಪ ದಿವ್ಯಹಸ್ತದಿಂದ ನೆರವೇರಿಸಲಾಯಿತು. ನಾಗದೇವರಿಗೆ ತಂಬಿಲ, ಅಶ್ಲೇಷ ಪೂಜೆ, ವಾಸ್ತು ಹೋಮ, ಅಘೋರ ಹೋಮ, ಸತ್ಯನಾರಾಯಣ ಪೂಜೆ, ವೆಂಕಟ್ರಮಣ ಪೂಜೆ, ಕಲ್ಲುರ್ಟಿ ಪಂಜುರ್ಲಿ ದೈವಗಳ ಕೋಲ, ಗುಳಿಗನಿಗೆ ಕೋಲೋತ್ಸವ ನಡೆಯಿತು. 



ವಾಸ್ತು ಶಿಲ್ಪಿ ಪ್ರಸನ್ನ ಮುಳಿಯಾಲು, ಗಣೇಶ್‌ ಭಟ್‌ ಮಿತ್ತೂರು, ಬೋಲ್ದನ್ ಕುಟುಂಬಸ್ಥರ ತರವಾಡು ಮನೆಯ ಹಿರಿಯರಾದ ಐತಪ್ಪ ಬೆಳ್ತಂಗಡಿ, ಮೋಹಿನಿ ಬೆಳ್ಮ, ಕಾರ್ಯಕಾರಿ ಸಮಿತಿ ಪ್ರಮುಖರು, ಕುಟುಂಬಸ್ಥರು, ಊರಿನ ಭಕ್ತಾದಿಗಳು, ಹಿಂದೂ ಸಮಾಜದ ಮುಖಂಡರು, ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು