8:37 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು ರಂಗು

25/01/2025, 14:24

*ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ*

*ಸಿನಿಮಾ ತಾರೆಯರಿಗಾಗಿ ರಂಗು ರಂಗು ಎಲ್ಲಿಗೆ ಬಂತು ಕುವೆಂಪು ಆಶಯ ; ಬಡವರ ಮದುವೆಗೆ ಡೇಟ್ ಲಭ್ಯ ಇರಲ್ಲ*

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ.
ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಬಿಡುವಿದ್ದ ಸಂದರ್ಭ ವಧುವರರ ಸತ್ಕಾರ ಸ್ವೀಕರಿಸಿ ಎನ್ನುವ ಒಳಾರ್ಥದಲ್ಲಿ ವಿವಾಹವನ್ನು ಸರಳೀಕರಣಗೊಳಿಸಿದ್ದರು. ಆದರೆ ಅದೀಗ ಮುಂದುವರೆದು ಶ್ರೀಮಂತ ಕುಟುಂಬಗಳ ಸ್ವತ್ತಾಗಿದ್ದು ಸರಳತೆಯ ವಿವಾಹವನ್ನು ವೈಭವೀಕರಿಸಿ ಜಗತ್ತಿಗೆ ಕುವೆಂಪು ಸಂದೇಶ ಸಾರುವ ಹಂತಕ್ಕೆ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತಮ್ಮ ಹೃದಯ ವೈಶಾಲ್ಯತೆಯನ್ನು ತೋರಿಸಿಕೊಳ್ಳುತ್ತಿದೆ‌.


ಹೇಮಾಂಗಣದ ಮುಂಭಾಗದಲ್ಲಿ ಬಾಳೆಯ ಗಿಡಗಳನ್ನು ಬಳಸಿಕೊಂಡು ಸಿಗರಿಸಿದರೆ. ವೇದಿಕೆಯಾಗಿ ಕಮಲದ ಹೂವುಗಳನ್ನು ಬಳಕೆ ಮಾಡಿಕೊಂಡು ವಧು-ವರರ ಕೈಯಿಂದ ಸರಳತೆಯ ಪಠ್ಯವನ್ನು ಚಾಚು ತಪ್ಪದೆ ಹೇಳಿಸಿದರೆ. ಮುಂಭಾಗದ ಮರಗಳಿಗೆ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ಕುಪ್ಪಳಿಯ ಶಾಂತ ನಿಸರ್ಗದ ಪರಿಚಯ ಮಾಡಿಸಿಕೊಟ್ಟರು. ಊಟಕ್ಕೆ ರೌಂಡ್ ಟೇಬಲ್ ಅಳವಡಿಸಿ ಅದಕ್ಕೆ ಶ್ವೇತ ವಸ್ತ್ರಗಳನ್ನು ಅಲಂಕರಿಸಿ ಯಾರು ಊಟವನ್ನು ಕಿಂಚಿತ್ತೂ ಹಾಳು ಮಾಡದಂತೆ ಜಾಗ್ರತೆವಹಿಸಿದರು. ಊಟಕ್ಕೂ ಮುನ್ನ ಆಯಕಟ್ಟಿನ ಜಾಗದಲ್ಲಿ ಬೆಂಗಳೂರಿನಿಂದ ಬಂದ ಅತಿಥಿಗಳಿಗೆ ಸುರಪಾನದ ಹಿತ ನೀಡಿದರು. ಮೂರ್ನಾಲ್ಕು ರೆಸಾರ್ಟ್ ಗಳಿಗೆ ಈ ಮದುವೆ ದೊಡ್ಡ ಲಾಭ ತಂದುಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು