4:31 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು ರಂಗು

25/01/2025, 14:24

*ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ*

*ಸಿನಿಮಾ ತಾರೆಯರಿಗಾಗಿ ರಂಗು ರಂಗು ಎಲ್ಲಿಗೆ ಬಂತು ಕುವೆಂಪು ಆಶಯ ; ಬಡವರ ಮದುವೆಗೆ ಡೇಟ್ ಲಭ್ಯ ಇರಲ್ಲ*

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ.
ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಬಿಡುವಿದ್ದ ಸಂದರ್ಭ ವಧುವರರ ಸತ್ಕಾರ ಸ್ವೀಕರಿಸಿ ಎನ್ನುವ ಒಳಾರ್ಥದಲ್ಲಿ ವಿವಾಹವನ್ನು ಸರಳೀಕರಣಗೊಳಿಸಿದ್ದರು. ಆದರೆ ಅದೀಗ ಮುಂದುವರೆದು ಶ್ರೀಮಂತ ಕುಟುಂಬಗಳ ಸ್ವತ್ತಾಗಿದ್ದು ಸರಳತೆಯ ವಿವಾಹವನ್ನು ವೈಭವೀಕರಿಸಿ ಜಗತ್ತಿಗೆ ಕುವೆಂಪು ಸಂದೇಶ ಸಾರುವ ಹಂತಕ್ಕೆ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತಮ್ಮ ಹೃದಯ ವೈಶಾಲ್ಯತೆಯನ್ನು ತೋರಿಸಿಕೊಳ್ಳುತ್ತಿದೆ‌.


ಹೇಮಾಂಗಣದ ಮುಂಭಾಗದಲ್ಲಿ ಬಾಳೆಯ ಗಿಡಗಳನ್ನು ಬಳಸಿಕೊಂಡು ಸಿಗರಿಸಿದರೆ. ವೇದಿಕೆಯಾಗಿ ಕಮಲದ ಹೂವುಗಳನ್ನು ಬಳಕೆ ಮಾಡಿಕೊಂಡು ವಧು-ವರರ ಕೈಯಿಂದ ಸರಳತೆಯ ಪಠ್ಯವನ್ನು ಚಾಚು ತಪ್ಪದೆ ಹೇಳಿಸಿದರೆ. ಮುಂಭಾಗದ ಮರಗಳಿಗೆ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ಕುಪ್ಪಳಿಯ ಶಾಂತ ನಿಸರ್ಗದ ಪರಿಚಯ ಮಾಡಿಸಿಕೊಟ್ಟರು. ಊಟಕ್ಕೆ ರೌಂಡ್ ಟೇಬಲ್ ಅಳವಡಿಸಿ ಅದಕ್ಕೆ ಶ್ವೇತ ವಸ್ತ್ರಗಳನ್ನು ಅಲಂಕರಿಸಿ ಯಾರು ಊಟವನ್ನು ಕಿಂಚಿತ್ತೂ ಹಾಳು ಮಾಡದಂತೆ ಜಾಗ್ರತೆವಹಿಸಿದರು. ಊಟಕ್ಕೂ ಮುನ್ನ ಆಯಕಟ್ಟಿನ ಜಾಗದಲ್ಲಿ ಬೆಂಗಳೂರಿನಿಂದ ಬಂದ ಅತಿಥಿಗಳಿಗೆ ಸುರಪಾನದ ಹಿತ ನೀಡಿದರು. ಮೂರ್ನಾಲ್ಕು ರೆಸಾರ್ಟ್ ಗಳಿಗೆ ಈ ಮದುವೆ ದೊಡ್ಡ ಲಾಭ ತಂದುಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು