12:51 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುವೆಂಪು ಆಶಯಕ್ಕೆ ಕೊಳ್ಳಿ: ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ; ಸಿನಿಮಾ ತಾರೆಯರಿಗಾಗಿ ರಂಗು ರಂಗು

25/01/2025, 14:24

*ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ*

*ಸಿನಿಮಾ ತಾರೆಯರಿಗಾಗಿ ರಂಗು ರಂಗು ಎಲ್ಲಿಗೆ ಬಂತು ಕುವೆಂಪು ಆಶಯ ; ಬಡವರ ಮದುವೆಗೆ ಡೇಟ್ ಲಭ್ಯ ಇರಲ್ಲ*

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ.
ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಬಿಡುವಿದ್ದ ಸಂದರ್ಭ ವಧುವರರ ಸತ್ಕಾರ ಸ್ವೀಕರಿಸಿ ಎನ್ನುವ ಒಳಾರ್ಥದಲ್ಲಿ ವಿವಾಹವನ್ನು ಸರಳೀಕರಣಗೊಳಿಸಿದ್ದರು. ಆದರೆ ಅದೀಗ ಮುಂದುವರೆದು ಶ್ರೀಮಂತ ಕುಟುಂಬಗಳ ಸ್ವತ್ತಾಗಿದ್ದು ಸರಳತೆಯ ವಿವಾಹವನ್ನು ವೈಭವೀಕರಿಸಿ ಜಗತ್ತಿಗೆ ಕುವೆಂಪು ಸಂದೇಶ ಸಾರುವ ಹಂತಕ್ಕೆ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ತಮ್ಮ ಹೃದಯ ವೈಶಾಲ್ಯತೆಯನ್ನು ತೋರಿಸಿಕೊಳ್ಳುತ್ತಿದೆ‌.


ಹೇಮಾಂಗಣದ ಮುಂಭಾಗದಲ್ಲಿ ಬಾಳೆಯ ಗಿಡಗಳನ್ನು ಬಳಸಿಕೊಂಡು ಸಿಗರಿಸಿದರೆ. ವೇದಿಕೆಯಾಗಿ ಕಮಲದ ಹೂವುಗಳನ್ನು ಬಳಕೆ ಮಾಡಿಕೊಂಡು ವಧು-ವರರ ಕೈಯಿಂದ ಸರಳತೆಯ ಪಠ್ಯವನ್ನು ಚಾಚು ತಪ್ಪದೆ ಹೇಳಿಸಿದರೆ. ಮುಂಭಾಗದ ಮರಗಳಿಗೆ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ಕುಪ್ಪಳಿಯ ಶಾಂತ ನಿಸರ್ಗದ ಪರಿಚಯ ಮಾಡಿಸಿಕೊಟ್ಟರು. ಊಟಕ್ಕೆ ರೌಂಡ್ ಟೇಬಲ್ ಅಳವಡಿಸಿ ಅದಕ್ಕೆ ಶ್ವೇತ ವಸ್ತ್ರಗಳನ್ನು ಅಲಂಕರಿಸಿ ಯಾರು ಊಟವನ್ನು ಕಿಂಚಿತ್ತೂ ಹಾಳು ಮಾಡದಂತೆ ಜಾಗ್ರತೆವಹಿಸಿದರು. ಊಟಕ್ಕೂ ಮುನ್ನ ಆಯಕಟ್ಟಿನ ಜಾಗದಲ್ಲಿ ಬೆಂಗಳೂರಿನಿಂದ ಬಂದ ಅತಿಥಿಗಳಿಗೆ ಸುರಪಾನದ ಹಿತ ನೀಡಿದರು. ಮೂರ್ನಾಲ್ಕು ರೆಸಾರ್ಟ್ ಗಳಿಗೆ ಈ ಮದುವೆ ದೊಡ್ಡ ಲಾಭ ತಂದುಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು